ಅಡಿಕೆ ತೋಟದಲ್ಲಿ ಗಾಂಜಾ ಬೆಳೆ ಪತ್ತೆ ; ಇಬ್ಬರು ಅರೆಸ್ಟ್ !
ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.
ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ದಾಳಿ ನಡೆಸಿ ಪೊಲೀಸರು ತೋಟದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ಸುಮಾರು 80 ಸಾವಿರ ರೂ. ಮೌಲ್ಯದ 2 ಕೆ.ಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ (34) ಮತ್ತು ಕಾರ್ತಿಕ್ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಗಜಾನನ ವಾಮನ ಸುತಾರ, ಇನ್ಸ್ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಕಲಂ 8(a), 20(a) (i) NDPS ಕಾಯ್ದೆ ರೀತ್ಯಾ ಪ್ರಕರಣ ತೀರ್ಥಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.