ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಏನಿದು ಘಟನೆ ?
ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ಮಾಹಿತಿ ಪ್ರಕಟಿಸಿದ್ದರು. ಅವರಿಗೆ ಕರೆ ಮಾಡಿದ ವ್ಯಕ್ತಿ ಬೆಂಗಳೂರಿನ ನಿವಾಸಿ ನವೀನ್ ಎಂದು ಪರಿಚಯಿಸಿಕೊಂಡಿದ್ದ. ಬೈಕಿನ ವಿವರಗಳನ್ನು ಪಡೆದುಕೊಂಡಿದ್ದ. ಮಾ. 30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ಹೇಳಿದ್ದು, ಪ್ರಮೋದ್ ಭಟ್ ಬೈಕ್ ಸಮೇತ ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದು, ನಿಲ್ದಾಣದ ಎದುರಿನ ಹೋಟೆಲ್ ಬಳಿ ಅವರನ್ನು ಭೇಟಿಯಾದ ನವೀನ್ 1.90 ಲಕ್ಷ ರೂ.ಗೆ ಬೈಕ್ ಖರೀದಿಸುವುದಾಗಿ ಹೇಳಿದ್ದಾನೆ. 70 ಸಾವಿರ ನಗದು ಕೊಡುತ್ತೇನೆ. ಬೈಕ್ ಮೇಲೆ ಇರುವ 1.20 ಲಕ್ಷ ರೂ. ಸಾಲವನ್ನು ತೀರಿಸುತ್ತೇನೆ ಎಂದು ತಿಳಿಸಿದ್ದ.
ಮಧ್ಯಾಹ್ನ 12 ಗಂಟೆಗೆ ಟ್ರಯಲ್ ನೋಡುವುದಾಗಿ ಬೈಕ್ ತೆಗೆದುಕೊಂಡು ಹೋದ ಆತ ಪರಾರಿಯಾಗಿದ್ದಾನೆ. ಮಧ್ಯಾಹ್ನ 2 ಗಂಟೆಗೆ ಫೋನ್ ಕರೆ ಸ್ವೀಕರಿಸಿದ್ದಾನೆ ನಂತರ ಫೋನ್ ಕರೆ ಸ್ವೀಕರಿಸದೆ ನಾಪತ್ತೆಯಾಗಿದ್ದಾನೆ.
ಬೈಕ್ ಕಳೆದುಕೊಂಡ ಪ್ರಮೋದ್ ಭಟ್ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 5, 2025ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ
RipponpeteJune 5, 2025ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ