ಎಸ್‌ಎಸ್‌ಎಲ್‌ಸಿಯಲ್ಲಿ ಯಡೂರು ಬಿ.ಜಿ. ನಿಧಿಗೆ ರಾಜ್ಯಕ್ಕೆ 5ನೇ ರ‍್ಯಾಂಕ್ ; ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ

Written by Mahesha Hindlemane

Published on:

ಹೊಸನಗರ ; ತಾಲೂಕಿನ ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಬಿ.ಜಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 621 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದಿದ್ದು, ಇಂದು ಅವರ ನಿವಾಸಕ್ಕೆ ಮಾಜಿ ಗೃಹಮಂತ್ರಿ, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಅಭಿನಂದಿಸಿದರು. 

WhatsApp Group Join Now
Telegram Group Join Now
Instagram Group Join Now

ಬಡತನ ಮತ್ತು ಗ್ರಾಮೀಣ ಪ್ರದೇಶದ ಅನಾನುಕೂಲತೆಯ ನಡುವೆಯೂ ನಿಧಿ ಸಾಧನೆ ಶ್ಲಾಘನೀಯ ಹಾಗೂ ಇತರೆ ಮಕ್ಕಳಿಗೆ ಸ್ಫೂರ್ತಿದಾಯಕವಾಗಿದೆ ಎಂದರು.

ಈ ವೇಳೆ ಬಿಜೆಪಿ ಮುಖಂಡ ಹಾಲಗದ್ದೆ ಉಮೇಶ್, ಬಂಕ್ರಿಬೀಡು ಮಂಜುನಾಥ್, ರಾಜೇಶ್ ಹಿರೇಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment