ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

Written by malnadtimes.com

Published on:

ರಿಪ್ಪನ್‌ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಐಐಟಿ ವ್ಯಾಸಂಗ ಮಾಡಿದ್ದ ಸೃಜನ್ ಗೆ ಸರಿಯಾದ ಉದ್ಯೋಗ ದೊರಕಿರಲಿಲ್ಲ. ಹಾಗಾಗಿ ಆತ ಗಾರೆಕೆಲಸ ಮಾಡುತ್ತಿದ್ದ. ಈ ಹಿನ್ನಲೆ ಓದಿಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ಹೋಗಿದ್ದ ಸಂದರ್ಭದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment