Shivamogga News

ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !

ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ ದಂಪತಿಯ ಪುತ್ರ ರಚಿತ್ ಡಿ.ಆರ್.(08) ಸಾವನ್ನಪ್ಪಿದ ಬಾಲಕ‌. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಸೋಂಕು ದೃಢಪಟ್ಟಿತ್ತು. 4 ದಿನಗಳ ಕಾಲ ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಸಿಕೊಂಡ ಸಹೋದರಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಚಿತ್ ಚಿಕಿತ್ಸೆ ಫಲಿಸದೆ ತಡರಾತ್ರಿ 8:30ರ ವೇಳೆಗೆ ಆಸ್ಪತ್ರೆಯಲ್ಲಿ ಸಾವನ್ನಪಿದ್ದು ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಚಿತ್ ತೀರ್ಥಹಳ್ಳಿಯ ವಾಗ್ದೇವಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದನು.

ತೀರ್ಥಹಳ್ಳಿ ತಾಲೂಕಿನ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆ ಕೆಎಫ್‌ಡಿ ಸೋಂಕಿನಿಂದ ಕಳೆದ ಫೆಬ್ರವರಿ ತಿಂಗಳಲ್ಲಿ ಸಾವನ್ನಪ್ಪಿದ್ದರು, ಇದು ಜಿಲ್ಲೆಯ ಈ ವರ್ಷದ ಮೊದಲ ಪ್ರಕರಣವಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>