ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಕ್ಯಾಂಟರ್ ಪಲ್ಟಿ ; ಧರ್ಮದರ್ಶಿಗಳ ವಾಹನ ಜಖಂ, ಚಂಡಿಕಾಂಬ ದೇವಸ್ಥಾನಕ್ಕೂ ಹಾನಿ !

HOSANAGARA ; ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್‌ವೊಂದು ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯ ಬಾಳೆಬರೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now

ರಾತ್ರಿ 8ರ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಸಾಗುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ದೇವಸ್ಥಾನದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ ವಾಹನ ಜಖಂಗೊಂಡಿದೆ. ಅಲ್ಲದೇ ಕಾಂಪೌಂಡ್ ಸಹ ಹಾನಿಯಾಗಿದೆ.

ಕ್ಯಾಂಟರ್ ಚಾಲಕ ಪದ್ದಿಲೇಟಿ ಬಿನ್ ನಾರಾಯಣಪ್ಪ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ನಿವಾಸಿಯಾಗಿದ್ದು, ಅವರ ಎಡಗಾಲು ಹಾಗೂ ಎಡ ಕೈಗೆ ಗಾಯವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]