Bangalore

ವಾಲ್ಮೀಕಿ ನಿಗಮದ ಮೃತ ಚಂದ್ರಶೇಖರನ್ ಕುಟುಂಬಸ್ಥರಿಗೆ 25 ಲಕ್ಷ ರೂ. ಚೆಕ್ ವಿತರಣೆ

BANGALORE ; ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.

WhatsApp Group Join Now
Telegram Group Join Now
Instagram Group Join Now

ಚಂದ್ರಶೇಖರನ್ ಕುಟುಂಬದ ಜೊತೆಗೆ ನಿಲ್ಲುವೆ :

📢 Stay Updated! Join our WhatsApp Channel Now →

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಂದ್ರಶೇಖರನ್ ಆತ್ಮಹತ್ಯೆ ದುರದೃಷ್ಟಕರ ಘಟನೆ. ಸರ್ಕಾರ ಅವರ ಕುಟುಂಬದ ನೋವಿಗೆ ಸ್ಪಂದಿಸಿದೆ ಮತ್ತು ಯಾವತ್ತೂ ಜೊತೆಗಿರಲಿದೆ ಎಂದು ಹೇಳಿದರು. ಚಂದ್ರಶೇಖರನ್ ಪತ್ನಿ, ಪುತ್ರರು ಪರಿಹಾರದ ಚೆಕ್‌ ಪಡೆದು ಸಿಎಂ ಆಶೀರ್ವಾದ ಪಡೆದರು.

ಸರ್ಕಾರ ಕೊಟ್ಟ ಹಣ ಅಪವ್ಯಯವಾಗದಂತೆ ನೋಡಿಕೊಳ್ಳಿ :

ಚಂದ್ರಶೇಖರನ್ ಕುಟುಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ಮನೆಯಲ್ಲಿ ಸಾವಾಗಬಾರದು. ಆದ ದುರ್ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಕರ್ತವ್ಯ. ನಿಮ್ಮ ಕುಟುಂಬಕ್ಕೆ ಸರ್ಕಾರ ನೀಡಿದ ಭರವಸೆಯಂತೆ ನಡೆದುಕೊಂಡಿದೆ. ಸಾಂತ್ವನ ಹೇಳಲು ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹಾರ ಕೊಡಿಸುವಂತೆ ಭರವಸೆ ನೀಡಿದ್ದೆ. ಅದರಂತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪರಿಹಾರ ನೀಡಲಾಗಿದೆ. ಸರ್ಕಾರ ಕೊಟ್ಟ ಹಣ ಅಪವ್ಯಯವಾಗದಂತೆ ನೋಡಿಕೊಳ್ಳಿ. ಮಕ್ಕಳ ಭವಿಷ್ಯಕ್ಕೆ ಒಂದು ಮಾರ್ಗ ತೋರಿಸಿ ಎಂದು ಸಲಹೆ ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕ ಎಸ್‌.ಎನ್. ಚನ್ನಬಸಪ್ಪ, ಭೋವಿ ಪೀಠದ ಸಿದ್ಧರಾಮೇಶ್ವರ ಸ್ವಾಮೀಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್‌. ರವಿಕುಮಾರ್‌, ಚಂದ್ರಶೇಖರನ್ ಕುಟುಂಬದ ಆಪ್ತ ಭೂಪಾಲ್‌ ಮತ್ತಿರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>