ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ.
ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ನಿವಾಸಿಯಾದ ದೇವರಾಜ್ (31) ಹತ್ಯೆಯಾದ ವ್ಯಕ್ತಿ. ವೆಂಕಟೇಶ್ ಸ್ನೇಹಿತನನ್ನು ಹತ್ಯೆಗೈದ ಆರೋಪಿ.
ದೇವರಾಜ್ ಮತ್ತು ವೆಂಕಟೇಶ್ ಇಬ್ಬರು ಸ್ನೇಹಿತರಾಗಿದ್ದು ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸಿಟ್ಟಿಗೆದ್ದ ವೆಂಕಟೇಶ್ ಗುದ್ದಲಿಯಿಂದ ದೇವರಾಜ್ ತಲೆಗೆ ಹೊಡೆದಿದ್ದಾನೆ ಗಂಭೀರ ಗಾಯಗೊಂಡ ದೇವರಾಜ್ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.