ಭದ್ರಾವತಿ

ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಪೊಲೀಸ್ ಸೇರಿ ಹಲವರಿಗೆ ಗಾಯ !

BHADRAVATHI ; ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸ್ ಸೇರಿದಂತೆ ಐವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶನಿವಾರ ಸಂಜೆ ಗಣಪತಿ ಹಬ್ಬದ ವೇಳೆ ಡೊಳ್ಳು ಬಾರಿಸುವ ತಂಡವನ್ನು ಬುಕ್ ಮಾಡಿದ್ದ ಎರಡು ಯುವಕರ ಸಂಘಗಳ ಮಧ್ಯೆ ಗಲಾಟೆ ನಡೆದಿದೆ. ಒಂದೇ ಸಮಯಕ್ಕೆ ಗಣಪತಿ ಮೆರವಣಿಗೆ ಹಮ್ಮಿಕೊಂಡಿದ್ದು, ಡೊಳ್ಳು ಬಾರಿಸುವ ತಂಡ ಬರುವುದು ವಿಳಂಬವಾಗಿದ್ದರಿಂದ ಗಲಾಟೆ ನಡೆದಿದೆ.

ಕಲ್ಲು, ದೊಣ್ಣೆಗಳಿಂದ ಯುವಕರು ಹೊಡೆದಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಲಾಟೆ ತಡೆಯಲು ಯತ್ನಿಸಿದ್ದಾರೆ. ಕಲ್ಲು ತೂರಾಟದಲ್ಲಿ ಪೊಲೀಸ್ ಒಬ್ಬರು ಗಾಯಗೊಂಡಿದ್ದು, ನಾಲ್ವರು ಯುವಕರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]