ರಿಪ್ಪನ್ಪೇಟೆ ; ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್ ಕೃಷ್ಣಮೂರ್ತಿ ಎನ್.ಬಿ. ಇವರಿಗೆ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಅದ್ಧೂರಿಯಾಗಿ ಗ್ರಾಮಸ್ಥರು, ಅಭಿಮಾನಿಗಳು ಸ್ವಾಗತಿಸಿ ಶುಭ ಹಾರೈಸಿದರು.

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಮಾರ್ಗ ಮಧ್ಯ ನಿವೃತ್ತ ಯೋಧ ಕೃಷ್ಣಮೂರ್ತಿಯವರನ್ನು ಸ್ವಾಗತಿಸಿ ಅಭಿನಂದಿಸಿ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಲೆಂದು ಹಾರೈಸಿ ಅಭಿನಂದಿಸಿದರು. ನಂತರ ತೆರೆದ ವಾಹನದಲ್ಲಿ ಯೋಧ ಕೃಷ್ಣಮೂರ್ತಿ ಎನ್.ಬಿ. ಇವರನ್ನು ಮೆರವಣಿಗೆಯಲ್ಲಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಸ್ವಗ್ರಾಮ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾಮನಗದ್ದೆ ಕರೆದೊಯ್ಯಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾ ಘಟಕದ ಆಧ್ಯಕ್ಷ ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಲೇಖನ ಚಂದ್ರಶೇಖರ್, ಸುಶೀಲ ಮೂಡಾಗ್ರೆ, ಸೀತ ರಾಜಪ್ಪ, ಇನ್ನಿತರರು ಪಾಲ್ಗೊಂಡಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.