Chikkamagaluru

ತಂದೆ ಎದುರೆ ಮಗುವನ್ನು ಹೊತ್ತೊಯ್ದ ಚಿರತೆ !

ತರೀಕೆರೆ ; ಆಟವಾಡುತ್ತಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೋಟದ ಮನೆಯ ಕೆಲಸಗಾರ ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿ (05) ಮೃತ ಮಗು. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದೆ. ಪಕ್ಕದಲ್ಲೇ ಇದ್ದ ತಂದೆ ಚಿರತೆ ಹಿಂದೆ ಓಡಿ ಹೋಗಿದ್ದು, ಚಿರತೆ ಮಗುವಿನೊಂದಿಗೆ ನಾಪತ್ತೆಯಾಗಿತ್ತು. ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>