Ripponpete

ಧಗಧಗನೆ ಹೊತ್ತಿ ಉರಿದ ಭತ್ತದ ಹುಲ್ಲು ಸಾಗಿಸುತ್ತಿದ್ದ ಲಾರಿ !

ರಿಪ್ಪನ್‌ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/r/15vC9ykfx7/

ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆಯನೂರು ಮೂಲದ ವ್ಯಕ್ತಿಯೊಬ್ಬ ಕಣಬಂದೂರು, ಕರಡಿಗ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಒಣ ಹುಲ್ಲನ್ನು ಖರೀದಿಸಿ ಕೊಂಡೊಯ್ಯುತಿದ್ದಾಗ 11 ಕೆ.ವಿ. ವಿದ್ಯುತ್ ತಂತಿಗೆ ತಗುಲಿ ಈ ಅವಘಡ ಸಂಭವಿಸಿದ್ದು ಕ್ಷಣಾರ್ಧದಲ್ಲೇ ಲಾರಿ ಸಮೇತ ಸಂಪೂರ್ಣ ಹುಲ್ಲು ಸುಟ್ಟು ಭಸ್ಮವಾಗಿದೆ‌.

ವಿಷಯ ತಿಳಿಯುತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆ ನಂತರ ಹೊಸನಗರ ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಆದರೆ ಲಾರಿ ಹಾಗೂ ಹುಲ್ಲು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]