ಶಿವಮೊಗ್ಗ ಸುದ್ದಿ

06 ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು !

ತೀರ್ಥಹಳ್ಳಿ ; ಕಳೆದ 06 ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದಲ್ಲಿ ಇಂದು ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮಾಳೂರು ಗ್ರಾಮದ ಮಂಜುಳಾ (25) ಸಾವನ್ನಪ್ಪಿರುವ ಮೃತ ಬಾಣಂತಿ. ಹೆರಿಗೆಯಾಗಿ ಆರು ದಿನದ ನಂತರ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಮಂಜುಳಾ ಮೃತಪಟ್ಟಿದ್ದಾರೆ.

ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳಾ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ ಬಾಣಂತಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಲೀವರ್, ಕಿಡ್ನಿ ವೈಫಲ್ಯತೆ ಕಂಡು ಇಂದು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಜೆಸಿ ಆಸ್ಪತ್ರೆಯಲ್ಲಿ ಫೆ.9 ರಂದು ದಾಖಲಾಗಿದ್ದ ಮಂಜುಳಾಗೆ ಅಂದೇ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಫೆ.14 ರವರೆಗೆ ಅಲ್ಲೇ ಚಿಕಿತ್ಸೆ ನೀಡಲಾಗಿತ್ತು. ಫೆ.14ರಿಂದ ನಂತರ ಇವತ್ತಿನವರೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಸಾವಿಗೆ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಎಂಬುದು ಕುಟುಂಬಸ್ಥರ ಆರೋಪವಾಗಿದೆ.

‘ಮಹಿಳೆಗೆ ಹೆರಿಗೆ ವೇಳೆ ಗರ್ಭಕೋಶ ಹಿಗ್ಗದೆ ಇರುವ ಕಾರಣ ಸಾವಾಗಿದೆ. ಇದು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಯಾವುದೇ ಕಾರಣಕ್ಕೂ ವೈದ್ಯರ ನಿರ್ಲಕ್ಷ್ಯ ತೋರಿಲ್ಲ. ಕೊನೆ ಹಂತದವರೆಗೂ ಮಹಿಳೆಯನ್ನ ಬಜಾವ್ ಮಾಡಿಕೊಳ್ಳುವ ಪ್ರಯತ್ನ ನಡೆದಿತ್ತು.’
– ಡಾ.ನಟರಾಜ್, ಡಿಹೆಚ್ಒ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]