RIPPONPETE ; ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾದ ಖಾಸಗಿ ಕಟ್ಟಡದ ತೆರವು ಕಾರ್ಯಾಚರಣೆ ಇಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತೃತ್ವದಲ್ಲಿ ದಿಢೀರ್ ಆರಂಭಗೊಂಡಿತು.
ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ಸಾಗರ ರಸ್ತೆಯ ಒಂದು ಕಿ.ಮೀ. ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ವರ್ಷಗಳೇ ಕಳೆಯುತ್ತಾ ಒಂದಿದ್ದು ರಸ್ತೆ ಅಗಲೀಕರಣದಿಂದಾಗಿ ಶಾಲಾ, ಕಾಲೇಜ್ ಸೇರಿದಂತೆ ಸಾರ್ವಜನಿಕರು ಮಳೆಗಾಲದಲ್ಲಿ ಕಲುಷಿತ ನೀರಿನ ಅಭೀಷೇಕ ಮಾಡಿಕೊಳ್ಳುವ ಸ್ಥಿತಿ, ಈಗ ಬೇಸಿಗೆ ಕಾಲದ ಕಾರಣ ದೂಳು ತುಂಬಿ ವಾತಾವರಣ ಕಲುಷಿತಗೊಂಡು ಉಸಿರಾಟಕ್ಕೂ ತೊಂದರೆಯಾಗುವಂತಾಗಿದ್ದು ಸಾಕಷ್ಟು ದ್ವಿಚಕ್ರ ವಾಹನ ಸವಾರರು ಭಾರಿ ವಾಹನಗಳು ಹಿಂದೆ ದೂಳಿನ ಕಾರಣ ಕಣ್ಣು ಕಾಣದಂತಾಗಿ ಅಪಘಾತಗಳು ಸಂಭವಿಸಿರುವ ಘಟನೆಗಳು ನಡೆದಿದ್ದು ಈ ಬಗ್ಗೆ ಮಾಧ್ಯಮಗಳಲ್ಲಿ ಗಮನಸೆಳೆಯವಂತಹ ವರದಿಯಿಂದಾಗಿ ಇಂದು ತಹಶೀಲ್ದಾರ್ ರಶ್ಮಿ ಹಾಲೇಶ್ ನೇತೃತ್ವದಲ್ಲಿ ಕಾಮಗಾರಿಗೆ ಅಡ್ಡಿಯಾಗಿರುವ ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಮುಂದಾಗಿ ಸಾರ್ವಜನಿಕರ ಪ್ರಶಂಸೆಗೆ ಕಾರಣವಾದರು.

ಸ್ಪಂದಿಸಿದ ತಹಶೀಲ್ದಾರ್ ;
ಕಟ್ಟಡದ ಮಾಲೀಕ ಎಸ್.ಚಂದ್ರಪ್ಪ ಕಳೆದ ಒಂದು ವರ್ಷದಿಂದ ಈ ಕಟ್ಟಡಕ್ಕೆ ನ್ಯಾಯಾಲಯದ ತಡೆ ಅದೇಶವಿದೆ ಎಂದು ಹೇಳಿ ಬರುವ ಅಧಿಕಾರಿಗಳನ್ನು ದಿಕ್ಕು ತಪ್ಪಿಸಿ ಸಾಗು ಹಾಕುತ್ತಿದ್ದು ಇಂದು ನೇರವಾಗಿ ತಹಶೀಲ್ದಾರ್ ರಶ್ಮಿ ಹಾಲೇಶ್ ತಮ್ಮ ಸಿಬ್ಬಂದಿಗಳೊಂದಿಗೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಜೆಸಿಬಿ, ಹಿಟಾಚಿಯ ಸಹಾಯದೊಂದಿಗೆ ದಿಢೀರ್ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಕಟ್ಟಡದ ಮಾಲೀಕ ಯಂತ್ರಗಳ ಬಳಿ ತಡೆಯೊಡ್ಡಲು ಹೋಗಿ ಕೆಲಸಮಯ ಮಾತಿನ ಚಕಮಕಿ ನಡೆದು ಕೊನೆಗೆ ತಹಶೀಲ್ದಾರ್ ಮುಲಾಜಿಲ್ಲದೆ ಜೆಸಿಬಿಯವರಿಗೆ ತೆರವು ಕಾರ್ಯಾಚರಣೆ ನಡೆಸುವಂತೆ ಸೂಚಿಸಿ ತಡೆಮಾಡಿದ ಕಟ್ಟಡದ ಮಾಲೀಕ ಎಸ್.ಚಂದ್ರಪ್ಪ ಮತ್ತು ಆತನ ಪುತ್ರರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್ ಸಬ್ಇನ್ಸ್ಪೆಕ್ಟರ್ಗೆ ಆದೇಶಿಸಿದರು.

ತಹಶೀಲ್ದಾರ್ ರಶ್ಮಿ ಹಾಲೇಶ್ ಈ ಕ್ರಮಕ್ಕೆ ಸಾರ್ವಜನಿಕರಲ್ಲಿ ಪ್ರಶಂಸೆ ಕಾರಣವಾಯಿತು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
HosanagaraMay 31, 2025ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
HosanagaraMay 30, 2025ಕೋವಿಡ್ ಕುರಿತು ಜಾಗೃತಿ ವಹಿಸಿ ; ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ
Crime NewsMay 30, 2025ಯುವಕನ ಜೊತೆ ಎರಡು ಮಕ್ಕಳ ಮಹಿಳೆ ಲವ್ವಿಡವ್ವಿ ; ಸಾವಿನಲ್ಲಿ ಅಂತ್ಯಕಂಡ ಪ್ರೇಮ್ ಕಹಾನಿ !