HOSANAGARA ; ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಹೊಸನಗರ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಶಂಕರಗೌಡ ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿಗಳು ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ರಾತ್ರಿ 3 ಗಂಟೆಯ ಸುಮಾರಿಗೆ ಅಕ್ರಮವಾಗಿ ಮರಳು ತುಂಬಿ ಸೊನಲೆ ಕಡೆಯಿಂದ ವಾರಂಬಳ್ಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ (ಕೆಎ 14ಬಿ 6972)ಯನ್ನು ವಶಪಡಿಸಿಕೊಂಡು ಲಾರಿ ಮಾಲೀಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

