ತರೀಕೆರೆ ; ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ವೆಂಕಟೇಶ್ (58) ಮೃತಪಟ್ಟ ರೈತ. ವೆಂಕಟೇಶ್ ಮನೆ ಮುಂದೆ ತೋಟದಲ್ಲಿ ಹಸು ಕಟ್ಟುವಾಗ ಆನೆ ದಾಳಿ ನಡೆಸಿ ರೈತನನ್ನು ಸೊಂಡಿಲಿನಲ್ಲಿ ಸುತ್ತಿ ತೆಂಗಿನ ಮರಕ್ಕೆ ಹೊಡೆದಿದೆ.
ರೈತ ಮುಂಜಾನೆ ಕತ್ತಲಿದ್ದ ಕಾರಣ ಅಲ್ಲಿ ಕಾಡಾನೆ ಇದ್ದ ವಿಚಾರ ತಿಳಿಯದೇ ಮನೆ ಮುಂದೆ ಹಸು ಕಟ್ಟುತ್ತಿದ್ದರು. ಈ ವೇಳೆ ಆನೆ ಉಸಿರಾಡುವ ಸದ್ದು ಕೇಳಿ ಮೊಬೈಲ್ನಿಂದ ಟಾರ್ಚ್ ಲೈಟ್ ಹಾಕಿದ್ದಾರೆ. ಲೈಟ್ ಹಾಕಿದ ತಕ್ಷಣ ಆನೆ ಸೊಂಡಿಲಿನಿಂದ ರೈತನನ್ನು ಹಿಡಿದು ಮರಕ್ಕೆ ಹೊಡೆದಿದೆ. ಪರಿಣಾಮ ರೈತ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂಟಿ ಸಲಗದ ಕಾಟಕ್ಕೆ ಬೇಸತ್ತಿರೋ ಲಕ್ಕವಳ್ಳಿ ಹೋಬಳಿ ಜನರು, ಪರಿಹಾರ ಕೊಡುವುದರಿಂದ ಜೀವ ತರಲ್ಲ, ಆನೆಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.