ಶಿವಮೊಗ್ಗ ಸುದ್ದಿ

ದನ ಬರುವುದನ್ನು ನೋಡಿ ಚರಂಡಿಗೆ ಬಿದ್ದು ಯುವಕ ಸಾವು !

SORABA ; ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೋಕ್ ಸುಹೇಲ್ (18) ಮೃತ ಯುವಕ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದ್ದಾನೆ. ಪರಿಣಾಮ ತಲೆ ಮತ್ತು ಪಕ್ಕೆ ಭಾಗಕ್ಕೆ ಗಂಭೀರ ಗಾಯವಾಗಿರುತ್ತದೆ.

ತಕ್ಷಣವೇ ಶಿರಾಳಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶೋಕ್ ಸುಹೇಲ್ ಮೃತಪಟ್ಟಿದ್ದಾನೆ ಎಂದು ಆತನ ತಂದೆ ಸಿಖ್ಬತುಲ್ಲಾ ಅಬ್ದುಲ್ ಜಲೀಲ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವರದಿ: ದತ್ತ, ಸೊರಬ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]