Accident

ಗರ್ತಿಕೆರೆ | ಲಾರಿ ಮೈಮೇಲೆ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು !

ರಿಪ್ಪನ್‌ಪೇಟೆ ; ಲಾರಿ ಮೈಮೇಲೆ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಗರ್ತಿಕೆರೆ ಸಮೀಪದ ಎಣ್ಣೆನೊಡ್ಲು ಗ್ರಾಮದ ನಯಾಜ್ (40) ಎಂದು ಗುರುತಿಸಲಾಗಿದೆ. ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ ರಿಪ್ಪನ್‌ಪೇಟೆಯಿಂದ ಕೋಣಂದೂರು ಕಡೆಗೆ ಸಾಗುತ್ತಿದ್ದ ಜಂಬಿಟ್ಟಿಗೆ (ಕೆಂಪುಕಲ್ಲು) ತುಂಬಿದ ಲಾರಿ ನಯಾಜ್ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೆಳಿಗ್ಗೆ ನಯಾಜ್ ಪತ್ನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬಂದು ಬಸ್ ನಿಲ್ದಾಣದಲ್ಲಿ ಬಿಟ್ಟು, ಆಯನೂರು ಬಸ್‌ಗೆ ಕಳುಹಿಸಿದ್ದ. ನಂತರ ತೀರ್ಥಹಳ್ಳಿ ಸಮೀಪದ ಆರಗ ಗೇಟ್‌ನಲ್ಲಿ ವಾಸಿಸುವ ಚಿಕ್ಕಪ್ಪನಿಗೆ ಔಷಧಿ ಕಳುಹಿಸಲು ಸಾಗರದಿಂದ ಬರುತ್ತಿದ್ದ ಪ್ರಕಾಶ್ ಟ್ರಾವೆಲ್ಸ್ ಬಸ್‌ಗೆ ಪಾರ್ಸಲ್ ನೀಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು ಘಟನೆಯಲ್ಲಿ ನಯಾಜ್ ದೇಹದ ಸೊಂಟದ ಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಪತ್ನಿ, 11 ವರ್ಷದ ಹೆಣ್ಣು ಮಗಳು, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ನಯಾಜ್ ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>