ಪತ್ರೊಡೆಗೆ ಕೆಸುವಿನ ಎಲೆ ಕೀಳಲು ಮರವೇರಿದ ಯುವಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು‌ !

Written by Mahesha Hindlemane

Published on:

ತೀರ್ಥಹಳ್ಳಿ : ತಾಲ್ಲೂಕಿನ ಲಕ್ಕುಂದ ಸಮೀಪದಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪತ್ರೊಡೆಗಾಗಿ ಮರಗೆಸ ಎಲೆ ಕೀಳಲು ಮರ ಏರಿದ್ದ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್ ಶೆಟ್ಟಿ (32) ಆಕಸ್ಮಿಕವಾಗಿ ಹೈ-ಟೆನ್ಷನ್ (11KV) ವಿದ್ಯುತ್ ತಂತಿಗೆ ಸ್ಪರ್ಶಿಸಿ ಮರದಲ್ಲೇ ಮೃತಪಟ್ಟಿದ್ದಾನೆ.

ಮಲೆನಾಡಿನಲ್ಲಿ ಪತ್ರೊಡೆ ಜನಪ್ರಿಯ ಖಾದ್ಯವಾಗಿದ್ದು, ಅಭಿಷೇಕ್ ಸಹ ಅದಕ್ಕಾಗಿ ಮರ ಏರಿ ಎಲೆಗಳನ್ನು ಕೀಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮರದ ಸಮೀಪದ ಹೈ-ಟೆನ್ಷನ್ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಿಸಿದ್ದು ವಿದ್ಯುತ್ ಪ್ರವಾಹಕ್ಕೆ ಒಳಗಾಗಿ ಮರದ ಮೇಲೆಯೇ ಸಾವನ್ನಪ್ಪಿದ್ದಾನೆ.

ಈತನಿಗೆ ತಂದೆ-ತಾಯಿ ಇರಲಿಲ್ಲ. ತನ್ನ ಚಿಕ್ಕಮನ ಮಗಳ ಮನೆಯಲ್ಲಿ ವಾಸವಾಗಿದ್ದನು. ಇತ್ತೀಚೆಗಷ್ಟೇ ಮದುವೆಯಾಗಿದ್ದ ಅಭಿಷೇಕ್ ದಾಂಪತ್ಯ ಜೀವನವನ್ನು ಆರಂಭಿಸಿ ಹೊಸ ಕನಸುಗಳನ್ನು ಹೊತ್ತಿದ್ದು ಈತನ ದಾರುಣ ಅಂತ್ಯದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗುವಂತಾಗಿದೆ.

ಘಟನೆಯ ಮಾಹಿತಿ ತಿಳಿದು ತಕ್ಷಣ ಆಗುಂಬೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment