ಶಿವಮೊಗ್ಗ ಸುದ್ದಿ

ಆಡಿಕೃತ್ತಿಕೆ ಜಾತ್ರೆ: ಆಗಸ್ಟ್ 16ರಂದು ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ: ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ವೇಳೆ ಭಕ್ತರ ಹೆಚ್ಚಿನ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಆಗಸ್ಟ್ 16ರಂದು ಬೆಳಿಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಶಿವಮೊಗ್ಗದಲ್ಲಿ ತಾತ್ಕಾಲಿಕ ವಾಹನ ಸಂಚಾರ ನಿಷೇಧ ಮತ್ತು ಮಾರ್ಗ ಬದಲಾವಣೆ ಜಾರಿಗೆ ಬರಲಿದೆ. ಈ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಾಹನ ಸಂಚಾರ ಬದಲಾವಣೆ ವಿವರಗಳು:

  • ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ದಿಕ್ಕಿನಿಂದ ಬರುವ ಎಲ್ಲಾ ಭಾರೀ ವಾಹನಗಳು, ಬಸ್‌ಗಳು ಮತ್ತು ಕಾರುಗಳು: ಎಂ.ಆರ್.ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮೂಲಕ ಸಾಗಬೇಕು.
  • ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ದಿಕ್ಕಿಗೆ ಹೋಗುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‌ಗಳು: ಬೈಪಾಸ್ ರಸ್ತೆ, ಎಂ.ಆರ್.ಎಸ್ ಸರ್ಕಲ್ ಮೂಲಕ ಸಾಗಬೇಕು.
  • ಚಿತ್ರದುರ್ಗ, ಹೊಳೆಹೊನ್ನೂರು ದಿಕ್ಕಿನಿಂದ ನಗರಕ್ಕೆ ಬರುವ/ಹೊರಹೋಗುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‌ಗಳು: ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆ ಬಳಸಿ ಪ್ರಯಾಣಿಸಬೇಕು.
  • ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ/ಹೋಗುವ ಲಘು ವಾಹನಗಳು: ಪಿಳ್ಳಂಗಿರಿ ಕ್ರಾಸ್ ಅಥವಾ ಹೊಳಬೆನವಳ್ಳಿ ತಾಂಡ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪ ಮೂಲಕ ಬಿ.ಹೆಚ್. ರಸ್ತೆ ಸೇರಿ, ನಂತರ ಬೈಪಾಸ್ ರಸ್ತೆ ಬಳಸಿ ಸಾಗಬೇಕು.
  • ಶಿವಮೊಗ್ಗದಿಂದ ಹೊಳೆಹೊನ್ನೂರು, ಚಿತ್ರದುರ್ಗ ದಿಕ್ಕಿಗೆ ಹೋಗುವ ಲಘು ವಾಹನಗಳು: ಬೈಪಾಸ್ ರಸ್ತೆ ಮೂಲಕ ಮಲವಗೊಪ್ಪ ಯಲವಟ್ಟಿ ಕ್ರಾಸ್ – ಪಿಳ್ಳಂಗಿರಿ ಕ್ರಾಸ್ ಮೂಲಕ ಸಾಗಬೇಕು.
  • ಹರಿಹರ, ಹೊನ್ನಾಳಿ ದಿಕ್ಕಿನಿಂದ ಬರುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‌ಗಳು: ಸಂಗೊಳ್ಳಿ ರಾಯಣ್ಣ ಸರ್ಕಲ್ – ಕೆ.ಇ.ಬಿ ಸರ್ಕಲ್ – ಉಷಾ ನರ್ಸಿಂಗ್ ಹೋಂ ಸರ್ಕಲ್ – 100 ಅಡಿ ರಸ್ತೆ – ವಿನೋಬನಗರ ಮಾರ್ಗವಾಗಿ ಸಾಗಬೇಕು.
  • ಹೊಳೆಹೊನ್ನೂರು ಸರ್ಕಲ್‌ನಿಂದ ಗುರುಪುರದ ಯಲವಟ್ಟಿ ಕ್ರಾಸ್‌ವರೆಗೆ: ಸಾರ್ವಜನಿಕ ವಾಹನ ಸಂಚಾರ ಸಂಪೂರ್ಣ ನಿಷೇಧ.

ಪೊಲೀಸ್ ವಾಹನಗಳು, ಅತಿಥಿ ,ಗಣ್ಯರ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650