Hosanagara

ಅಬ್ಬಿ ಜಲಪಾತದಲ್ಲಿ ಕಾಲುಜಾರಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ !

MALNAD TIMES | 24 JUN 2024

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

HOSANAGARA | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಲಾಸಿ ಅಬ್ಬಿ ಜಲಪಾತದ ಬಳಿ ಫೋಟೋ ತೆಗೆಯುವ ವೇಳೆ ಕಾಲುಜಾರಿ ಬಿದ್ದು ನೀರು ಪಾಲಾಗಿದ್ದ ಯುವಕನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.

ನಿನ್ನೆ ಮಧ್ಯಾಹ್ನದಿಂದ ನಗರ ಠಾಣೆ ಪಿಎಸ್‌ಐ ರಮೇಶ್ ನೇತೃತ್ವದಲ್ಲಿ ಹೊಸನಗರ ಅಗ್ನಿಶಾಮಕ ದಳ, ಸ್ಥಳೀಯರಿಂದ ತೀವ್ರ ಶೋಧ ನಡೆಯಿತಾದರೂ ನೀರುಪಾಲಾಗಿದ್ದ ಬಳ್ಳಾರಿ ಮೂಲದ ವಿನೋದ್ (26) ಶವ ಪತ್ತೆಯಾಗಿರಲಿಲ್ಲ.

ವಿನೋದ್ ನೀರು ಪಾಲಾಗುವ ಮುನ್ನ ತೆಗೆದ ಫೋಟೋ

ಸೋಮವಾರ ಬೆಳಗ್ಗೆ ಮುಳುಗು ತಜ್ಞರಾದ ಈಶ್ವರ ಮಲ್ಪೆ ಮತ್ತು ತಂಡ, ಕೋಟ ಜೀವನ್ ಮಿತ್ರ, ನಾಗರಾಜ ಪುತ್ರನ್, ಅವರನ್ನು ಕರೆಸಿ ಶೋಧ ಕಾರ್ಯ ನಡೆಸಿದ ಬಳಿಕ ನೀರಿನೊಳಗೆ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದ ವಿನೋದ್ ಮೃತದೇಹವನ್ನು ಹೊರ ತೆಗೆಯಲಾಯಿತು.

ನಗರ ಸಂಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಆತನ ಹುಟ್ಟೂರು ಬಳ್ಳಾರಿ ಜಿಲ್ಲೆ ಮಿಂಚೇರಿಗೆ ತೆಗೆದುಕೊಂಡು ಹೋಗಲಾಯಿತು.

ಬೆಂಗಳೂರಿನಿಂದ 12 ಜನ ಪ್ರವಾಸಿಗರು ಯಡೂರು ಅಬ್ಬಿ ಫಾಲ್ಸ್ ವೀಕ್ಷಣೆಗೆ ನಿನ್ನೆ ಬಂದಾಗ ಈ ಅವಘಡ ಸಂಭವಿಸಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>