ಬೈಕ್ ಮತ್ತು ಟ್ಯಾಂಕರ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾ*ವು !

Written by Mahesha Hindlemane

Published on:

ತೀರ್ಥಹಳ್ಳಿ ; ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹನುಮಂತಪ್ಪ (59) ಮೃತ ಬೈಕ್ ಸವಾರ. ಇವರು ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಬೆಜ್ಜವಳ್ಳಿ ಸಮೀಪ ಬೈಕಿನಲ್ಲಿ ರಸ್ತೆಯನ್ನು ದಾಟುತ್ತಿದ್ದಾಗ ಏಕಾಏಕಿ ಎದುರಿನಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಹನಮಂತಪ್ಪ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment