ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತನನ್ನು ಹುಣಸೂರು ಮೂಲದ ಅಶೋಕ್ (25) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ಸಿರಿವಂತೆ ಮತ್ತು ಗಾಳಿಪುರ ರಸ್ತೆಯ ಮಧ್ಯೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಅಶೋಕ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಅತಿಯಾದ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

