ಹೊಸನಗರ ; ತಡರಾತ್ರಿ ಮಾಸ್ತಿಕಟ್ಟೆ – ಕುಂದಾಪುರ ಬಾಳೆಬರೆ ಘಾಟಿ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ಸಿನಲ್ಲಿದ್ದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಮಾಸ್ತಿಕಟ್ಟೆಯ ಶಾಲೋಮ್ ಆಸ್ಪತ್ರೆಯಲ್ಲಿ ಜನಸ್ನೇಹಿ ಡಾಕ್ಟರ್ಗಳಾದ
ಡಾ. ಸುದೀಪ್ ಡಿಮೆಲೋ ಹಾಗು ಡಾ. ಪ್ರದೀಪ್ ಡಿಮೆಲ್ಲೋ ಅವರು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಉಚಿತವಾಗಿ ತುರ್ತು ಚಿಕಿತ್ಸೆ ನೀಡಿ ಮಾನವಿಯತೆ ಮೆರೆದಿದ್ದಾರೆ.
ಹೆಚ್ಚಿನ ಚಿಕಿತ್ಸೆಯ ಆವಶ್ಯಕತೆ ಇದ್ದಂತಹ ಗಾಯಾಳುಗಳನ್ನು ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಆರ್.ಎಂ ಮಂಜುನಾಥ್ ಗೌಡ, ಅವರ ಕೊಡಚಾದ್ರಿ ಯುವಕರ ಪಡೆಯ ಸಹಕಾರದೊಂದಿಗೆ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಗೆ ಆಂಬುಲೆನ್ಸ್ ಹಾಗೂ ಇತರೆ ವಾಹನಗಳ ವ್ಯವಸ್ಥೆಯನ್ನು ಮಾಡಿ ಕಳುಹಿಸಿಕೊಟ್ಟಿದ್ದಾರೆ. ಜೊತೆಗೆ ಎಲ್ಲಾ ಗಾಯಾಳುಗಳಿಗೆ ಭೋಜನದ ವ್ಯವಸ್ಥೆ ನೀಡಿ ಮಕ್ಕಳು, ಮಹಿಳೆಯರಿಗೆ ಮತ್ತು ಗಾಯಾಳುಗಳಿಗೆ ಅವರವರ ಊರುಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ.
ತಡರಾತ್ರಿಯಲ್ಲೂ ಸರ್ಕಾರಿ ಆಸ್ಪತ್ರೆ ವ್ಯವಸ್ಥೆ ಬಗ್ಗೆ ಮತ್ತು ಡಾಕ್ಟರ್ ಚಿಕಿತ್ಸೆ ಬಗ್ಗೆ ಡಾ. ಆರ್.ಎಂ ಮಂಜುನಾಥ ಗೌಡ ಅವರ ಸಹಕಾರದ ಬಗ್ಗೆ ರೋಗಿಗಳು ಹಾಗೂ ಸಂಬಂಧಿಕರು ಧನ್ಯವಾದಗಳು ತಿಳಿಸಿದರು.
ಸ್ಥಳಕೆ ಪೊಲೀಸ್ ಸಿಬ್ಬಂದಿ ಅರುಣೋದಯ ಧಾವಿಸಿ ಟ್ರಾಫಿಕ್ ನಿಯಂತ್ರ ಮಾಡಿ ವಾಹನ ಸಂಚರಿಸುವಂತೆ ಮಾಡಿದರು.
ಈ ಸಂದರ್ಭದಲ್ಲಿ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ರಕ್ಷಾ ಸಮಿತಿ ಸದಸ್ಯರಾದ ಕುರುವಳ್ಳಿ ನಾಗರಾಜ್, ಮಾಸ್ತಿಕಟ್ಟೆಯ ಲಾಯ್ಡ್ ಡಿಸೋಜಾ, ವಾಸುದೇವ ಕಾಮತ್ ಕಾರ್ತಿಕ್ ಗೌಡ ಅನುಷ್ ಶೆಟ್ಟಿ ಪ್ರಜ್ವಲ್ ಪೂಜಾರಿ ಆಲ್ವಿನ್ ಡೆಮಲ್ಲು, ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.