Accident | ಕಾರಿಗೆ ಡಿಕ್ಕಿಯಾಗಿ 15 ಅಡಿ ಆಳಕ್ಕೆ ಉರುಳಿದ ಲಾರಿ !

Written by Mahesh Hindlemane

Published on:

HOSANAGARA | ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

School Holidays |  ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಾಯಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತಿದ್ದವರು ಶಿವಮೊಗ್ಗ ಮೂಲದವರೆಂದು ತಿಳಿದು ಬಂದಿದ್ದು, ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್’ನಲ್ಲಿ ಉಳಿದುಕೊಂಡಿದ್ದರು. ಬುಧವಾರ ಹುಲಿಕಲ್ ಫಾಲ್ಸ್ ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment