Accident

Accident | ಮೀನು ಹಿಡಿಯಲು ಹೋಗಿ ವಾಪಾಸ್ ಆಗುವಾಗ ದುರ್ಘಟನೆ !

HOSANAGARA | ಮೀನು ಹಿಡಿಯಲು ಹೋಗಿ ವಾಪಾಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಪಲ್ಟಿಯಾದ ಘಟನೆ ಮಾಸ್ತಿಕಟ್ಟೆ (Mastikatte) ಸಮೀಪದ ಶಂಕರಮನೆ ಎಂಬಲ್ಲಿ ಬುಧವಾರ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ತೀರ್ಥಹಳ್ಳಿಗೆ ವಾಪಾಸ್ ಆಗುವಾಗ ಈ ಘಟನೆ ನಡೆದಿದೆ.

ಪಟ್ಟಣದ ಸಮೀಪದ ಕೌರಿಬೈಲು, ಹೆಗ್ಗೆಬೈಲು ಹಾಗೂ ಸಿಬಿನಕೆರೆಯ ಐವರು ಯುವಕರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಗಾಯಗೊಂಡ ಮೂವರನ್ನು ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅದರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read more:School Holiday | ಭಾರಿ ಮಳೆ ಹಿನ್ನೆಲೆಯಲ್ಲಿ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>