ಹೊಸನಗರ: ಹೊಸನಗರದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಡಾ ದೋಸ್ತ್ ವಾಹನವು ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಚಾಲಕ ಸ್ಥಳದಲ್ಲೇ ಮೃತಪಟ್ಟುಮತ್ತೊಬ್ಬರು ಗಾಯಗೊಂಡ ದುರ್ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಮೃತನನ್ನು ಕುಂದಾಪುರ ತಾಲ್ಲೂಕು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ವಾಹನದ ಕ್ಲೀನರ್ ಪ್ರಭಾಕರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ವಾಹನದ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿದ್ಯುತ್ ಕಂಬವೂ ಕುಸಿದಿದ್ದು, ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿದರು.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಘಟನೆಯ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

