ಬೈಕ್ಗಳ ನಡುವೆ ಅಪಘಾತ ; ಓರ್ವ ಸಾವು !
ಸಾಗರ : ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾನ್ಲೆ ಕ್ರಾಸ್ ಬಳಿ ಅಪಘಾತ ನಡೆದಿದೆ.
ಶಿರಸಿ ಕಸ್ತೂರಬಾ ನಗರ ನಿವಾಸಿ ಮಣಿ ಮೃತಪಟ್ಟ ಯುವಕ. ಮಂಜುನಾಥ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಬ್ಬ ಬೈಕ್ ಸವಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.