ಸಾಗರ : ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು.
ಇಂಥ ದುರದೃಷ್ಟಕರ ಘಟನೆ ನಡೆದಿರುವುದು ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದಲ್ಲಿ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿಯಾಗಿರುವ ಮಂಜುನಾಥ ಗೌಡ. ಮಂಜುನಾಥ್ ಅವರು ಯಾವುದೇ ಕಾರ್ಯ ನಿಮಿತ್ತ ಪೇಟೆಗೆ ಬಂದಿದ್ದರು. ಆಗ ಅಪರಿಚಿತ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅವರು ಅಲ್ಲೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಮಂಜುನಾಥ ಗೌಡ ಅವರ ಇಬ್ಬರು ಮಕ್ಕಳ ಮದುವೆ ನಾಳೆ (ಜೂನ್ 28) ಕೆಂಜಿಗಾಪುರದಲ್ಲಿ ಆಯೋಜನೆಯಾಗಿದೆ. ಕಳೆದ ಹಲವು ಸಮಯದಿಂದ ಈ ಮದುವೆಗಾಗಿ ಮಂಜುನಾಥ್ ಓಡಾಟದಲ್ಲಿದ್ದರು. ಹೆಣ್ಣುಮಕ್ಕಳು ಅವರ ಮಾವ ರುದ್ರಪ್ಪ ಗೌಡ ಚನ್ನಕೊಪ್ಪ ಅವರ ಮನೆಯಲ್ಲಿದ್ದರು. ಅಲ್ಲಿಂದಲೇ ನಾಳೆ ದಿಬ್ಬಣ ಹೊರಡುವುದಕ್ಕಿತ್ತು.
ಹೀಗೆ ಅತ್ಯಂತ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಒಮ್ಮಿಂದೊಮ್ಮೆಗೇ ಸೂತಕ ಆವರಿಸಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಂಜುನಾಥ ಗೌಡ ಅವರಿಗೆ ಡಿಕ್ಕಿ ಹೊಡೆದ ವಾಹನದ ಪತ್ತೆಗಾಗಿ ಪ್ರಯತ್ನಿಸುತ್ತಿದ್ದಾರೆ.
ದುರ್ದೈವವೆಂದರೆ, ಮಂಜುನಾಥ್ ಅವರು ಕೆಲವು ಸಮಯದ ಹಿಂದೆ ತಮ್ಮ ಹೆಂಡತಿಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…