SAGARA | ಅಪಘಾತದಲ್ಲಿ ಗಾಯಗೊಂಡಿದ್ದ ಸಿಗಂದೂರು ಶ್ರೀ ಚೌಡಮ್ಮ ದೇವಿ ಕೃಪಾಪೋಷಿತ ಯಕ್ಷಗಾನ (Yakshagana) ಮೇಳದ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹೊಸನಗರ ತಾಲೂಕಿನ ಪುರಪ್ಪೆಮನೆ ಕೆಳಮನೆ ಗ್ರಾಮದ ಕೆ.ಜಿ. ವೇಣುಗೋಪಾಲ (44) ಸಾವನ್ನಪ್ಪಿದ್ದಾರೆ.
ಸೋಮವಾರ ರಾತ್ರಿ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದಾಗ ಆನಂದಪುರ ಸಮೀಪದ ಗಡಿಕಟ್ಟೆಯಲ್ಲಿ ಹಸು ಅಡ್ಡ ಬಂದಿದ್ದು ಆಯತಪ್ಪಿ ಬೈಕ್ನಿಂದ ಬಿದ್ದು ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾರೆ.
ಮೃತರು ತಂದೆ, ಭಾಗವತ ಕೆ.ಜಿ.ರಾಮರಾವ್, ತಾಯಿ ಹಾಗೂ ಓರ್ವ ಸಹೋದರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಕಲಾವಿದರ ಕುಟುಂಬದ ಕುಡಿಯಾಗಿದ್ದ ವೇಣುಗೋಪಾಲ ಉಡುಪಿಯ ಕಲಾಕೇಂದ್ರದಲ್ಲಿ ಭಾಗವತಿಕೆ ಸೇರಿದಂತೆ ಯಕ್ಷಗಾನದ ಸಾಂಪ್ರದಾಯಿಕ ಶಿಕ್ಷಣ ಪಡೆದಿದ್ದರು. ಈ ಹಿಂದೆ ಸಾಲಿಗ್ರಾಮ, ಮಂದಾರ್ತಿ ಮೇಳದ ಭಾಗವತರಾಗಿಯೂ ಕೆಲಸ ಮಾಡಿದ್ದರು.
ಕೆಲಕಾಲ ಉಡುಪಿ ಕಲಾಕೇಂದ್ರದಲ್ಲಿ ಗುರುಗಳಾಗಿಯೂ ಕೆಲಸ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಿಗಂದೂರು ಮೇಳದಲ್ಲಿ ಭಾಗವತರ ತಂಡದಲ್ಲಿ ಕೆಲಸ ಮಾಡಿದ್ದರು.
ರಂಗ ಪ್ರದರ್ಶನ ಹಾಗೂ ಭಾಗವತಿಕೆಗಳೆರಡರಲ್ಲೂ ಅವರು ತಮ್ಮ ಛಾಪು ತೋರಿಸಿದ್ದರು. ಬಯಲಾಟದ ಪ್ರಸಂಗಗಳಿಗೂ ಭಾಗವತರಾಗಿ ಕಾರ್ಯ ನಿರ್ವಹಿಸುವ ಮೂಲಕ ಅವರು ಗಮನ ಸೆಳೆದಿದ್ದರು.
LED Bulb | ಎಲ್ಇಡಿ ಹೆಡ್ಲೈಟ್ ಅಳವಡಿಸಿಕೊಂಡ ವಾಹನಗಳ ಮಾಲೀಕರೇ ದಂಡ ಕಟ್ಟಲು ಸಜ್ಜಾಗಿ !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ