ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಆರೋಪಿ ಅಂದರ್ !

Written by Mahesha Hindlemane

Published on:

ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏನಿದು ಘಟನೆ ?

ವಿಜಾಪುರ ನಿವಾಸಿ ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ ಮೇಯಲು ಬಿಡಲಾಗಿತ್ತು. 4:00 ಗಂಟೆ ಸುಮಾರಿಗೆ ಹಸುವೊಂದರ ಕೆಚ್ಚಲು ಕತ್ತರಿಸಿದ್ದು ಕಂಡುಬಂದಿತ್ತು. ಈ ಕುರಿತಂತೆ ಭಾನುವಾರ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರೋಪಿ ರಾಮಚಂದ್ರ ಕತ್ತಿ ಹಾಗೂ ದೊಣ್ಣೆಯಿಂದ ಹೊಡೆದು, ಹಸುವಿನ ಕೆಚ್ಚಲು ಗಾಯಪಡಿಸಿದ್ದು ಪತ್ತೆಯಾಗಿತ್ತು. ಆರೋಪಿಯ ತೋಟಕ್ಕೆ ದನಗಳು ನುಗ್ಗುತ್ತಿದ್ದು, ಇದರಿಂದ ಆಕ್ರೋಶಗೊಂಡು ಈ ಕೃತ್ಯ ನಡೆಸಿರುವುದಾಗಿ ಎಂದು ತಿಳಿದುಬಂದಿದೆ.

Leave a Comment