ಹೊಸನಗರ : ಬೈಕ್ ಮತ್ತು ಹುಂಡಿ ಕಳ್ಳತನ ಪ್ರಕರಣದ ಆರೋಪಿ ಬಂಧನ

Written by Mahesha Hindlemane

Published on:

ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದು, ಅವನಿಂದ 60,000 ರೂಪಾಯಿ ಮೌಲ್ಯದ ಹೀರೋ ಹೊಂಡಾ ಸ್ಲ್ಪೆಂಡರ್ ಬೈಕ್ ಹಾಗೂ 1,100 ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ನೇತೃತ್ವದ ಸಿಬ್ಬಂದಿ ಸತೀಶ್ ರಾಜ್, ಮಾಯಪ್ಪ ಗೋಕಾವಿ, ಸುನೀಲ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡರ್ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಯಿತು‌.

ಪ್ರಕರಣದ ವಿವರ :

ಹೊಸನಗರ ಪಟ್ಟಣದ ನಗರ ರಸ್ತೆಯ ಗುರುಶಕ್ತಿ ಪೆಟ್ರೋಲ್ ಬಂಕ್ ಹತ್ತಿರ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಕದ್ದ ಪ್ರಕರಣ ಮತ್ತು ನಗರದ ಪಕ್ಕದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಒಡೆಯುವ ಮೂಲಕ ಹುಂಡಿಯ ಹಣ ಕಳವು ಪ್ರಕರಣಗಳು ನಡೆದಿತ್ತು. ಈ ಪ್ರಕರಣಗಳ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.

Leave a Comment