Crime News

ಅಜ್ಜಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು !

ಶಿವಮೊಗ್ಗ : ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಿಶೋರ್ (28) ಮೇಲೆ ವಾಜಪೇಯಿ ಲೇಔಟ್ ಪ್ರದೇಶದಲ್ಲಿ ಪೊಲೀಸರು ಈ ಘಟನೆ ನಡೆದಿದೆ. ಪೊಲೀಸರು ಕಿಶೋರ್ ಅವರನ್ನು ಬಂಧಿಸುವಾಗ, ಆತ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ದೊಡ್ಡಪೇಟೆ ಇನ್ಸ್‌ಪೆಕ್ಟರ್ ಗಾಳಿಯಲ್ಲಿ ಎಚ್ಚರಿಕೆಗಾಗಿ ಫೈರ್ ಮಾಡಲಾಯಿತು. ಆದರೆ ಕಿಶೋರ್ ಎಚ್ಚರಿಕೆಯನ್ನು ಮರೆತಿದ್ದರಿಂದ, ಪೊಲೀಸರು ಅವನ ಕಾಲಿಗೆ ಗುಂಡೇಟು ನೀಡಿದ್ದಾರೆ.

ಗಾಯಗೊಂಡ ಕಿಶೋರ್ ನನ್ನು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ವೇಳೆ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಅವರನ್ನು ಕೂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣದ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>