ಹೊಸನಗರ : ಅರಣ್ಯ ಇಲಾಖೆ ಯಾವುದೇ ಮುನ್ಸೂಚನೆ ಹಾಗೂ ನೋಟಿಸ್ ನೀಡದೆ ಮೇ 28ರಂದು ಏಕಾಏಕಿ ಮನೆಯನ್ನು ತೆರವು ಮಾಡಿದ್ದಾರೆಂದು ಆರೋಪಿಸಿ ಮನೆಯ ಮಾಲೀಕರು ಹಾಗೂ ಗ್ರಾಮಸ್ಥರು ಇಲ್ಲಿನ ಅರಣ್ಯ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ ಘಟನೆ ನಡೆದಿದೆ.
ಹಿನ್ನಲೆ ;
ಹೊಸನಗರ ತಾಲ್ಲೂಕು ಕಸಬಾ ಹೋಬಳಿ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗೋಡಿ ಗ್ರಾಮದ ಸರ್ವೆ ನಂಬರ್ 7ರಲ್ಲಿ ನಾಗರಾಜ ಎಂಬುವವರು ವಾಸವಿದ್ದ ಮನೆಯನ್ನು ಯಾರು ಇಲ್ಲದ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ನೋಟಿಸ್ ನೀಡದೆ ಏಕಾಏಕಿ ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಮನೆಯ ಮಾಲೀಕ ನಾಗರಾಜ್ ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆಯ ಮುಂಭಾಗ ಧರಣಿ ನಡೆಸಿದ್ದಾರೆ.
ನಾವು ಸುಮಾರು 40 ವರ್ಷಗಳಿಂದ ಈ ಜಾಗದಲ್ಲಿ ವಾಸವಿದ್ದೇವೆ. ನಮಗೆ ಮನೆ ಕಂದಾಯ ಡಿಮ್ಯಾಂಡ್ ಹಾಗೂ ಇಲ್ಲಿ ವಾಸವಗಿರುವುದಕ್ಕೆ ಎಲ್ಲ ದಾಖಲೆಗಳು ನಮ್ಮ ಬಳಿ ಇದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ನಮ್ಮ ಮನೆಯ ಮೇಲೆ ದಾಳಿ ಮಾಡಿ ಮನೆಯನ್ನು ಧ್ವಂಸ ಮಾಡಿ ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕೂಲಿ ಮಾಡಿ ಜೀವನ ಸಾಗಿಸುವ ಬಡ ಕುಟುಂಬಕ್ಕೆ ವಾಸಿಸಲು ಮನೆಯೇ ಇಲ್ಲದಂತಾಗಿದ್ದು ಮುಂದೆ ಬರುವುದು ಮಳೆಗಾಲವಾಗಿದ್ದು ನಮಗೆ ವಾಸಿಸಲು ಯಾವುದೇ ಮನೆಯಿಲ್ಲ. ಬಡ ಕುಟುಂಬಕ್ಕೆ ನ್ಯಾಯ ಕೊಡಬೇಕೆಂದು ಆಗ್ರಹಿಸಿದ್ದಾರೆ.
“ಕೆಲ ವರ್ಷಗಳಿಂದ ಯಾರು ವಾಸವಿರದ ಜಾಗ ಇದಾಗಿದ್ದು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುತ್ತದೆ. ಕುಟುಂಬವು ಪುನಃ ಮೂಲ ನೆಲೆಗೆ ಬಂದು ಇತ್ತೀಚೆಗೆ ಶೆಡ್ ತರಹದ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಕೇವಲ ಹಳೆ ಮನೆಯ ನೆಲಗಟ್ಟು (ಫೌಂಡೇಶನ್), ತೆಂಗಿನಮರ ಸಾಕ್ಷಿಯಿಂದ ದೃಢೀಕರಿಸೋದು ಅಸಾಧ್ಯ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.”

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





