ತೀರ್ಥಹಳ್ಳಿ ; ಅಡಿಕೆ ತೋಟದ ಅಡಿಕೆ ಮರಕ್ಕೆ ಔಷಧಿ ಹೊಡೆಯಲು ಇಟ್ಟಿದ್ದ ಡ್ರಂಗೆ ಕಿಡಿಗೇಡಿಗಳು ಸುಣ್ಣ ಮತ್ತು ರಾಳಕ್ಕೆ ವಿಷಕಾರಕ ಕೀಟನಾಶಕವನ್ನು ಔಷಧಕ್ಕೆ ಮಿಶ್ರಣ ಮಾಡಿರುವುದರಿಂದ ಗೊತ್ತಿಲ್ಲದೆ ಔಷಧಿಯನ್ನು ಸಿಂಪಡಣೆ ಮಾಡಿರುವುದರಿಂದ 300ಕ್ಕೂ ಹೆಚ್ಚು ಫಸಲು ಬರುವ ಅಡಿಕೆ ಮರಗಳು ಸುಟ್ಟು ಹೋದ ಘಟನೆ ತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೇಕೊಪ್ಪ ಗ್ರಾಮದಲ್ಲಿ ನಡೆದಿದೆ.
ಈ ಗ್ರಾಮದ ಶಂಕ್ರಪ್ಪಗೌಡ ಎಂಬುವವರ ತೋಟದಲ್ಲಿ ಔಷಧಿ ಹೊಡೆಯಲು ಸುಣ್ಣ ಮತ್ತು ರಾಳವನ್ನು ಮಿಶ್ರಿತ ಮಾಡಿ ಇಡಲಾಗಿತ್ತು. ಈ ಮಿಶ್ರಿತ ಡ್ರಂಗೆ ಕಿಡಿಗೇಡಿಗಳು ವಿಷವನ್ನು ಬೆರೆಸಿರುವುದರಿಂದ ಗೊತ್ತಾಗದೆ ಗೊನೆಗಾರರು ಔಷಧಿಯನ್ನು ಸಿಂಪಡಿಸಿದ್ದಾರೆ.
ಔಷಧಿ ಸಿಂಪಡಿಸಿ ಎರಡ್ಮೂರು ದಿನಕ್ಕೆ ಅಡಿಕೆ ಗಿಡಗಳು ಸುಟ್ಟು ಹೋಗುತ್ತಿರುವುದನ್ನು ಗಮನಿಸಿದ ಮನೆಯ ಮಾಲೀಕರು ತೋಟದ ಔಷಧಿಯವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸಿದಾಗ ಸುಣ್ಣ ಮತ್ತು ರಾಳ ಮಿಶ್ರಿತ ಡಂಗೆ ಕಿಡಿಗೇಡಿಗಳು ಬೇರೆ ಪಾಯಿಸನ್ ವಸ್ತು ಸೇರ್ಪಡೆಯಾಗಿರುವುದು ತಿಳಿದು ಬಂದಿದೆ.
ಈ ಘಟನೆ ಬಗ್ಗೆ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.24 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.