ಆಗುಂಬೆ, ಜೂನ್ 13: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಮುಂಗಾರು ಹವಾಮಾನದಲ್ಲಿ ಭಾರಿ ವಾಹನ ಸಂಚಾರದಿಂದ ಆಗಬಹುದಾದ ಭೂ ಕುಸಿತದ ಭೀತಿಯ ಹಿನ್ನೆಲೆಯಲ್ಲಿ, ಜೂ. 15 ರಿಂದ ಸೆಪ್ಟೆಂ. 30ರವರೆಗೆ ಸಾರ್ವಜನಿಕ ಮತ್ತು ಸರಕು ಸಾಗಣೆ ವಾಹನ (heavy vehicles)ಗಳು ಆಗುಂಬೆ ಘಾಟಿಯಲ್ಲಿ ಸಂಚಾರ ನಿಷೇಧ ಎಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಭಾರಿ ವಾಹನಗಳ ಪರ್ಯಾಯ ಮಾರ್ಗಗಳು:
- ಉಡುಪಿ–ತೀರ್ಥಹಳ್ಳಿ ನಡುವೆ ಸಂಚರಿಸುವ ಭಾರಿ ವಾಹನಗಳು ಈಗ ಉಡುಪಿ → ಕುಂದಾಪುರ → ಸಿದ್ಧಾಪುರ → ಮಾಸ್ತಿಕಟ್ಟೆ → ತೀರ್ಥಹಳ್ಳಿಗೆ ಪರ್ಯಾಯ ಮಾರ್ಗ
- ಜೊತೆಗೆ ಇನ್ನೊಂದು ಪರ್ಯಾಯ ಮಾರ್ಗ ಎಂದರೆ: ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟಿ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಸೂಚಿಸಲಾಗಿದೆ.
Read more
ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650