ತೀರ್ಥಹಳ್ಳಿ

ಆಗುಂಬೆ ಘಾಟಿ ಕಾರ್ಯಾಚರಣೆ ಪೂರ್ಣ: ವಾಹನ ಸಂಚಾರ ಪುನಾರಂಭ

ತೀರ್ಥಹಳ್ಳಿ ಆಗುಂಬೆ ಘಾಟಿಯಲ್ಲಿ ಶುಕ್ರವಾರ ಸಂಜೆ ಧರೆ ಕುಸಿತ ಮತ್ತು ಮರ ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಹಾಗೂ ಮಣ್ಣನ್ನು ತೆರವು ಮಾಡುವ ಕಾರ್ಯಾಚರಣೆ ಇಂದು (ಶನಿವಾರ) ಬೆಳಗ್ಗೆಯಿಂದ ಪ್ರಾರಂಭವಾಗಿ ಯಶಸ್ವಿಯಾಗಿ ಪೂರ್ಣಗೊಂಡಿದೆ.

WhatsApp Group Join Now
Telegram Group Join Now
Instagram Group Join Now

ಶುಕ್ರವಾರ ಸಂಜೆ ಆರನೇ ತಿರುವಿನಲ್ಲಿ ಧರೆ ಕುಸಿತದಿಂದಾಗಿ ರಸ್ತೆ ಸಂಪೂರ್ಣ ಮುಚ್ಚಿಕೊಂಡಿತ್ತು. ಕತ್ತಲಾದ ಕಾರಣ ತೆರವು ಕಾರ್ಯಾಚರಣೆ ತಕ್ಷಣ ಸಾಧ್ಯವಾಗದೆ, ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು.

ಬೆಳಗ್ಗಿನಿಂದಲೇ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾರಂಭ ಮಾಡಿ ಮರ ಮತ್ತು ಮಣ್ಣನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆದರೆ, ಇದರ ಬೆನ್ನಿಗೇ ಮತ್ತೊಂದು ಮರ ಜಾರಿ ರಸ್ತೆ ಮೇಲೆ ಬಿದ್ದಿದ್ದರಿಂದ ಮತ್ತೆ ಅಡಚಣೆ ಉಂಟಾಯಿತು. ಕೂಡಲೇ ಆ ಮರವನ್ನು ತೆರವು ಮಾಡಲಾಗಿದ್ದು, ಈಗಾಗಲೇ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

👉 ಪ್ರಸ್ತುತ ಆಗುಂಬೆ ಘಾಟಿಯಲ್ಲಿ ಸಂಚಾರ ಸರಾಗವಾಗಿ ನಡೆಯುತ್ತಿದ್ದು, ಪ್ರಯಾಣಿಕರಿಗೆ ಆತಂಕ ಬೇಡ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650