ಹೊಸನಗರ ; ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ, ಅದು ಅಲ್ಲದೇ ಶಾಲೆ-ಕಾಲೇಜು ಮಕ್ಕಳು ಗ್ರಾಮಾಂತರ ಪ್ರದೇಶದಿಂದ ಹಳ್ಳ-ಕೊಳ್ಳಗಳನ್ನು ದಾಟಿ ಬರುವ ಸಂಭವವಿರುವುದರಿಂದ ಅನಾಹುತಗಳನ್ನು ತಪ್ಪಿಸಲು ಈಗಾಗಲೇ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಹಸೀಲ್ದಾರ್ ಭರತ್ರಾಜ್ ತಿಳಿಸಿದ್ದಾರೆ.
ಅದರಂತೆ ಸಾರ್ವಜನಿಕರು ಯಾವುದೇ ಅಪಾಯ/ಅನಾಹುತಗಳು ಸಂಭವಿಸಿದ್ದಲ್ಲಿ ತಾಲ್ಲೂಕು ಆಡಳಿತದ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 9741621135ಗೆ ಸಂಪರ್ಕಿಸಲು ಹಾಗೂ ಸಂಬಂಧಪಟ್ಟ ಪಿಡಿಒ ಹಾಗೂ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದು, ಮೂರು ತಿಂಗಳುಗಳ ಕಾಲ ಎಲ್ಲ ಅಧಿಕಾರಿಗಳು ಸ್ಥಳೀಯವಾಗಿ ವಾಸವಿದ್ದು ಮಳೆಯಿಂದ ಅಲ್ಲಲ್ಲಿ ನಡೆಯುವ ಅನಾಹುತಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

