ಶಿಕಾರಿಪುರ

ಅಂಬ್ಲಿಗೊಳ – ಅಂಜನಾಪುರ ಜಲಾಶಯ ಭರ್ತಿ: ಬಾಗಿನ ಸಮರ್ಪಣೆ!

ಶಿಕಾರಿಪುರ : ತಾಲ್ಲೂಕಿನ ರೈತರ ಜೀವನಾಡಿಯಾದ ಅಂಬ್ಲಿಗೊಳ ಹಾಗೂ ಅಂಜನಾಪುರ ಜಲಾಶಯಗಳು ಭರ್ತಿಯಾಗಿವೆ, ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ವರ್ಷಧಾರೆ ಕಂಡುಬಂದ ಪರಿಣಾಮ, ಈ ಜಲಾಶಯಗಳು ತಮ್ಮ ನೈಜ ಸೊಬಗನ್ನು ಮರಳಿ ಪಡೆದುಕೊಂಡಿವೆ.

WhatsApp Group Join Now
Telegram Group Join Now
Instagram Group Join Now

ಇಂದು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಕುಟುಂಬ ಸಮೇತರಾಗಿ ಸ್ಥಳಕ್ಕೆ ಭೇಟಿ ನೀಡಿದ್ದು, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದರು. ಈ ಸಂದರ್ಭ ಅವರು ಜಲಾಶಯವನ್ನು ಭರ್ತಿ ಮಾಡಿದ ಮಳೆಗೂ ದೇವರಿಗೆ ಕೃತಜ್ಞತೆ ಸಲ್ಲಿಸಿದರು.

ಅನ್ನದಾತನ ಮೊಗದಲ್ಲಿ ಭರವಸೆಯ ಮಂದಹಾಸ ಮೂಡಿದ್ದು, ಈ ಸಾಲಿನಲ್ಲಿ ಉತ್ತಮ ಇಳುವರಿಯ ನಿರೀಕ್ಷೆ ಜೋರಾಗಿದೆ. ಮಳೆ, ನೀರು ಮತ್ತು ಭದ್ರತೆಯೊಂದಿಗೆ ಈ ಬಾರಿ ಕೃಷಿಯ ಭವಿಷ್ಯ ಹಸಿರು ನಿರೀಕ್ಷೆಗಳಿಂದ ತುಂಬಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕಾರ್ಯಕ್ರಮದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಹಲವಾರು ಮುಖಂಡರು, ಹಿರಿಯರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

Read More :ಮೂಗುಡ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಸಮಾವೇಶ | ಭಾರತ ದೇಶ ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವುದರ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ ; ಆರಗ ಜ್ಞಾನೇಂದ್ರ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650