ಹೊಸನಗರ ; ತಾಲೂಕಿನ ಶಕ್ತಿದೇವತೆ ಎಂದೇ ಭಕ್ತಾದಿಗಳಿಂದ ಆರಾಧಿಸಲ್ಪಡುವ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನವು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ದೇವಸ್ಥಾನ ಅಭಿವೃದ್ಧಿ ಸಮಿತಿಯ ಹಿಂದಿನ ಅವಧಿಯ ಕಾರ್ಯಾಧ್ಯಕ್ಷ ಕಲಗೋಡು ರತ್ನಾಕರ ಅವರು ತಮ್ಮ ಅವಧಿಯಲ್ಲಿ ಭಕ್ತಾದಿಗಳಿಂದ ಸಂಗ್ರಹವಾಗಿದ್ದ ದೇಣಿಗೆ ಹಣ ಹಾಗೂ ಲೆಕ್ಕಪತ್ರಗಳನ್ನು ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಸಮ್ಮುಖದಲ್ಲಿ ಮಂಗಳವಾರ ನೂತನ ಆಡಳಿತ ಸಮಿತಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಪ್ರಮುಖರಾದ ಬಂಡಿ ರಾಮಚಂದ್ರ, ಬಿ.ಜಿ.ಚಂದ್ರಮೌಳಿ, ತಾರಕೇಶ್ವರ, ಎಚ್.ಬಿ.ಚಿದಂಬರ, ಎರಗಿ ಉಮೇಶ, ರಾಮಚಂದ್ರಪ್ಪ, ಕೃಪಾನಂದರಾವ್, ಸಂತೋಷ್, ವೇದಾಂತಪ್ಪಗೌಡ ಹಾಗೂ ವ್ಯವಸ್ಥಾಪನಾ ಸಮಿತಿಯ ಪುಟ್ಟಪ್ಪ, ಸುಧೀರ ಭಟ್, ಹರೀಶ್, ವಿಜೇಂದ್ರರಾವ್, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.