Hosanagara

ಆನೆಗದ್ದೆ ಜಯಪ್ಪ ನಿಧನಕ್ಕೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಂತಾಪ

ಹೊಸನಗರ : ಕಳೆದ 45 ವರ್ಷದಿಂದ ಇಲ್ಲಿನ ಗಾಂಧಿ ಮಂದಿರದಲ್ಲಿ ವಿವಿಧ ಇಲಾಖೆಗಳಿಗೆ ಪಕ್ಷಾತೀತವಾಗಿ ಕಾರ್ಯಕರ್ತರಿಗೆ ಅರ್ಜಿ ಬರೆದುಕೊಟ್ಟು, ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದ ಆನೆಗದ್ದೆ ಗ್ರಾಮದ ವಾಸಿ         ‘ಕಾಂಗ್ರೆಸ್ ಜಯಪ್ಪ’ ಎಂದೇ ತಾಲೂಕಿನಾದ್ಯಂತ ಹೆಸರಾಗಿದ್ದ ಆನೆಗದ್ದೆ ಜಯಪ್ಪ ಬುಧವಾರ ತಡರಾತ್ರಿ ನಿಧನರಾದ ಹಿನ್ನಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೃತರಿಗೆ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತನಾಗಿದ್ದು, ಕಳೆದ ಬಾರಿ ಹುಂಚ ಗ್ರಾಮ ಪಂಚಾಯತಿ ಸದಸ್ಯನಾಗಿ ಚುನಾಯಿತರಾಗಿದ್ದರು.  

ಕಾಂಗ್ರೆಸ್ ಪಕ್ಷಕ್ಕೆ ಮೃತನ ಸೇವೆ ಅನನ್ಯವಾಗಿದ್ದು, ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  

ಈ ವೇಳೆ ಪಕ್ಷದ ಹಿರಿಯ ಕಾರ್ಯಕರ್ತ ಬಿ.ಆರ್. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ , ಎಂ.ಪಿ. ಸುರೇಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಬಿ.ಜಿ. ನಾಗರಾಜ್, ಪ್ರಮುಖರಾದ ಕೆ.ಕೆ. ಅಶ್ವಿನಿ ಕುಮಾರ್, ಎಂ.ಪಿ. ಲೋಹಿತ್, ನೇತ್ರಾವತಿ ಭಟ್, ಜಯನಗರ ಚನ್ನಬಸವ, ಚಂದ್ರಮೂರ್ತಿ, ನೋರಾ ಮೆಟೆಲ್ಡ್ ಸಿಕ್ವೇರಾ, ಉಬೇದ್ ಸಾಬ್, ಗುರು ಜಯನಗರ ಇತರರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>