ಕಳಸ ; ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಕ್ಕಿಯ ಭದ್ರಕಾಳಿ ಮತ್ತು ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವರ್ಧಂತೋತ್ಸವ ವಿಜೃಂಭಣೆಯಿಂದ ನೆರವೇರಿತು.
ಏ 22ರಂದು ಶ್ರೀ ಭದ್ರಕಾಳಿ ಅಮ್ಮನವರು ಮತ್ತು ಚೌಡೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ ಹೋಮ, ವರ್ಧಂತಿ ಪೂಜೆ, ಅಮ್ಮನವರಿಗೆ ವಿಶೇಷ ಪೂಜೆ ಮತ್ತು ಅಭಿಷೇಕ ಮತ್ತು ಅನ್ನ ಸಂತರ್ಪಣೆ ನೆರವೇರಿತು.
ಏ 23ರಂದು ಸೋಮೇಶ್ವರ ಸ್ವಾಮಿ ಮತ್ತು ಭೂತರಾಯನ ಸನ್ನಿಧಿಯಲ್ಲಿ ರುದ್ರಹೋಮ, ಸೋಮೇಶ್ವರ ಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಮತ್ತು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
2 ದಿನ ಊರಿನ ಮತ್ತು ಪರ ಊರಿನ ನೂರಾರು ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.