Hosanagara

ರಾಜ್ಯ ಮಟ್ಟಕ್ಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ಯಕ್ಷ ಕುಟೀರದ ಮಕ್ಕಳು 

HOSANAGARA ; ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಬಾಲ ನ್ಯಾಯ ಮಂಡಳಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಪ್ರತಿಭೋತ್ಸವ ಆಯ್ಕೆ ಸ್ಪರ್ಧೆಯಲ್ಲಿ ತಾಲೂಕಿನ ಬಟ್ಟೆಮಲ್ಲಪ್ಪದ ಶ್ರೀ ವ್ಯಾಸ ಮಹರ್ಷಿ ಗುರುಕುಲ ಯಕ್ಷ ಕುಟೀರದ ಮಕ್ಕಳು ದ್ವೀತಿಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲಾ ಬಾಲ ನ್ಯಾಯ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 16 ವರ್ಷ ವಯೋಮಾನದೊಳಗಿನ ಸೃಜನಾತ್ಮಕ ಕಲಾ ಪ್ರದರ್ಶನ ವಿಭಾಗದಲ್ಲಿ ವಾಲ್ಮೀಕಿ ರಾಮಾಯಣವನ್ನು ಯಕ್ಷ ನೃತ್ಯದ ಮೂಲಕ ಪ್ರದರ್ಶನ ನೀಡಿದ ಯಕ್ಷ ಕುಟೀರದ ಮಕ್ಕಳು ದ್ವಿತೀಯ ಸ್ಥಾನ ಪಡೆದರು. ಅಲ್ಲದೇ ಇದೇ ವಿಭಾಗದಲ್ಲಿ ನವೆಂಬರ್ 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ನೃತ್ಯ ಪ್ರದರ್ಶನ ಮತ್ತು ಸ್ಪರ್ಧೆ ನೀಡಲಿದ್ದಾರೆ.

ಸ್ಪರ್ಧೆಯಲ್ಲಿ ಪೃತ್ವಿಕಾ ಯು. ಶೆಟ್ಟಿ, ಚಿನ್ಮಯಿ ಎಂ. ಬ್ಯಾಣದ, ಚುಕ್ಕಿ ಎಂ. ಬ್ಯಾಣದ ಭಾಗವಹಿಸಿ ವಿಜೇತರಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶ್ರೀ ವ್ಯಾಸ ಮಹರ್ಷಿ ಗುರುಕುಲ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ಫೋಷಕರು ಹಾಗೂ ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಭಿನಂದಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಜಿಲ್ಲಾ ನ್ಯಾಯಾಧೀಶ ಸಂತೋಷ ಕುಮಾರ್, ಇಲಾಖಾ ಜಿಲ್ಲಾ ಅಧಿಕಾರಿಗಳಾದ ಶಶಿರೇಖಾ, ಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಹೊಸನಗರ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>