SHIVAMOGGA ; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಕರ್ತವ್ಯನಿರತ ವೈದ್ಯಾಧಿಕಾರಿ ಡಾ.ವೆಂಕಟೇಶ್ ಅವರ ಮೇಲಿನ ಹಲ್ಲೆಗೆ ಕೆಪಿಸಿಸಿ ವೈದ್ಯರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಪ್ರದೀಪ್ ಡಿಮೆಲ್ಲೋ ಖಂಡನೆ ವ್ಯಕ್ತಪಡಿಸಿದ್ದಾರೆ.
ವೈದ್ಯರು ತಮ್ಮ ಪ್ರಾಣದ ಹಂಗು ತೊರೆದು ಮನುಷ್ಯರ ಪ್ರಾಣ ಉಳಿಸಲು ಶ್ರಮಿಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಅನೇಕರ ಪ್ರಾಣವನ್ನು ಕಾಪಾಡಿದ್ದಾರೆ. ಇಂತಹ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಇಡೀ ವೈದ್ಯ ಸಮೂಹಕ್ಕೆ ನೋವುಂಟಾಗಿದೆ ಎಂದು ಡಾ.ಪ್ರದೀಪ್ ಪತ್ರಿಕಾ ಹೇಳಿಕೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಹಾಗೂ ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕು ಎಂದು ಡಾ.ಪ್ರದೀಪ್ ಡಿಮೆಲ್ಲೋ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.