HOSANAGARA ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ಅರ್ಚನಾ ಶಿವಮೊಗ್ಗದಲ್ಲಿ ನಡೆದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಂಭ್ರಮಕ್ಕಾಗಿ ಪಟ್ಟಣದ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದವರು ಎಂದು ಮಲೆನಾಡು ಪ್ರೌಢಶಾಲೆ ಆವರಣದಲ್ಲಿ ಕು. ಅರ್ಚನ ರವರನ್ನು ಅಭಿನಂದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ಸ್ಥಾಪಕ ಅಧ್ಯಕ್ಷ ಪ್ರಶಾಂತ್ ಎಸ್ ಕಳೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನ ಅಧ್ಯಕ್ಷ ಡಿ ಆರ್ ವಿನಯ್, ಹಿರಿಯ ಕ್ರೀಡಾಪಟು ಕೆ ಇಲಿಯಾಸ್, ಹಿರಿಯ ಕಲಾವಿದರಾದ ಜಿ.ವಿ. ವೇಣುಗೋಪಾಲ್, ಬಿ.ಎಸ್ ಸುರೇಶ, ಎಂ ಕೆ ವೆಂಕಟೇಶಮೂರ್ತಿ, ಕೆ ಜಿ ನಾಗೇಶ್, ದೀಪಕ್ ಸ್ವರೂಪ್, ನವಶಕ್ತಿ ರಮೇಶ್, ಅರವಿಂದ ಗಣೇಶಗೌಡ, ಮಲೆನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುಧಾಕರ್ ಕ್ರೀಡಾ ಶಿಕ್ಷಕರಾದ ಸುರೇಶ್, ಜ್ಯೋತಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದು 3.11 ಅಡಿ ಎತ್ತರದ ಕು. ಅರ್ಚನಾ ರವರ ಸಾಧನೆಯನ್ನು ಕೊಂಡಾಡಿ ರಾಜ್ಯ ಮಟ್ಟದಲ್ಲೂ ಅರ್ಚನಾ ಕ್ರೀಡಾ ಸಾಧನೆ ಸಾಧಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಲಿ ಎಂದು ಹಾರೈಸಿದರು.

ಅರ್ಚನಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯಾಗಿದ್ದು ಕೊಡಸೆ ಹೆಬ್ಬುರಳಿಯ ಬಡ ಕೃಷಿಕ ಕೃಷ್ಣ ಹಾಗೂ ಕಲಾವತಿ ದಂಪತಿಗಳ ಪುತ್ರಿ. 3 ಸಾವಿರ ಮೀಟರ್ ಓಟವನ್ನು ಕೇವಲ 11.4 ನಿಮಿಷಗಳಲ್ಲಿ ಕ್ರಮಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.