HOSANAGARA ; ಶರನ್ನವರಾತ್ರಿಯ ಮಹಾನವಮಿ ಪ್ರಯುಕ್ತ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯುಧಪೂಜೆ ನಡೆಯಿತು.

ಆರಕ್ಷಕರ ಬೈಕ್, ಜೀಪ್, ಕಾರು ಹಾಗು ವಿವಿಧ ಶಸ್ತ್ರಾಸ್ತ್ರಗಳೊಂದಿಗೆ ಅಗತ್ಯ ದಾಖಲೆ ಪುಸ್ತಕಗಳಿಗೆ ವಿಶೇಷ ಪೂಜೆ ನೆರವೇರಿತು.
ಅರ್ಚಕ ಕೃಷ್ಣಮೂರ್ತಿ ಅವರ ಪೌರೋಹಿತ್ಯ ಹಾಗು ಠಾಣಾ ಸಬ್ ಇನ್ಸ್ಪೆಕ್ಟರ್ ಶಂಕರ್ ಗೌಡ ಪಟೇಲ್ ನೇತೃತ್ವದಲ್ಲಿ ನಡೆದ ಪೂಜಾ ಕೈಂಕಾರ್ಯಗಳಲ್ಲಿ ಸಿಬ್ಬಂದಿಗಳಾದ ಗಂಗಾಧರ್, ಸಂದೀಪ್, ಮಹೇಶ್, ವೆಂಕಟೇಶ್, ವೀರೇಶ್, ಮಾಯಪ್ಪ, ತೀರ್ಥೆಶ್, ಆಸ್ಮಾ ಸೇರಿದಂತೆ ಹಲವರು ಹಾಜರಿದ್ದು ಪೂಜಾ ಕಾರ್ಯದಲ್ಲಿ ಸಹಕಾರ ನೀಡಿದರು.


ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.