Accident

ಬಿ.ವೈ. ವಿಜಯೇಂದ್ರ ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ !

ಚಿಕ್ಕಮಗಳೂರು ; ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು (ಬೆಂಗಾವಲು) ಕಾರಿಗೆ ಲಾರಿ ಗುದ್ದಿದ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ಬಸವತತ್ವ ಪೀಠದಲ್ಲಿ ಆಯೋಜಿಸಿದ್ದ ಬಸವತತ್ವ ಸಮಾವೇಶದಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಹೊರ ಜಿಲ್ಲೆಗಳಿಗೆ ತೆರಳಲು ಬಳಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗ ಜಖಂಗೊಂಡಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದ ಕಡೆಯಿಂದ ನೀಡಲಾದ ಅಧಿಕೃತ ಕಾರು ಇದಾಗಿತ್ತು. ವಿಜಯೇಂದ್ರ ಅವರು ತಮ್ಮ ಪರ್ಸನಲ್ ಕಾರಿನಲ್ಲಿ ಇದ್ದರು. ಪಕ್ಷ ನೀಡಿದ್ದ ಕಾರಿನಲ್ಲಿ ವಿಜಯೇಂದ್ರ ಅವರ ಫೋಟೋಗ್ರಾಫರ್ ಮತ್ತು ಪಿಎ ಸಂಚರಿಸುತ್ತಿದ್ದರು.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಲಾರಿ ಚಾಲಕನ ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿ ಪ್ರಕರಣ ದಾಖಲಿಸಿದ್ದಾರೆ.

ಬೀರೂರು ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಲಾರಿ ಮರದ ದಿಣ್ಣೆ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬೈಗೆ ತೆರಳುತ್ತಿತ್ತು ಎನ್ನಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>