Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ, ಸುರಕ್ಷಿತ Spill Way Gate ಮುಖಾಂತರ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ.
ಅಣೆಕಟ್ಟು ಸುರಕ್ಷತೆಗೆ ಪ್ರಥಮ ಆದ್ಯತೆ:
ಭದ್ರಾ ಜಲಾಶಯದ ನಿರ್ವಹಣೆಯು Rule Curve ನಿಯಮದ ಪ್ರಕಾರ ನಡೆಯುತ್ತಿದ್ದು, ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚು ನೀರು ಸಂಗ್ರಹವಾಗಿದರೆ, ಅತಿರೇಕದ ನೀರನ್ನು ನದಿಗೆ ಬಿಡುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರವಾಗಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
⚠️ ಸಾರ್ವಜನಿಕರಿಗೆ ಸೂಚನೆಗಳು:
- ನದಿಪಾತ್ರದ ಹತ್ತಿರ ತಿರುಗಾಡಬೇಡಿ
- ಜಾನುವಾರುಗಳನ್ನು ನದಿಯಿಂದ ದೂರವಿಡಿ
- ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಗೊಳ್ಳಲಿ
- ಸರ್ಕಾರಿ ಪ್ರಕಟಣೆಗಳನ್ನು ಅನುಸರಿಸಿ
Read More :ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.