Chikmagaluru News

ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಜನರಿಗೆ ಮುಂಜಾಗ್ರತಾ ಸೂಚನೆ

Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ, ಸುರಕ್ಷಿತ Spill Way Gate ಮುಖಾಂತರ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ.

WhatsApp Group Join Now
Telegram Group Join Now
Instagram Group Join Now

ಅಣೆಕಟ್ಟು ಸುರಕ್ಷತೆಗೆ ಪ್ರಥಮ ಆದ್ಯತೆ:

ಭದ್ರಾ ಜಲಾಶಯದ ನಿರ್ವಹಣೆಯು Rule Curve ನಿಯಮದ ಪ್ರಕಾರ ನಡೆಯುತ್ತಿದ್ದು, ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚು ನೀರು ಸಂಗ್ರಹವಾಗಿದರೆ, ಅತಿರೇಕದ ನೀರನ್ನು ನದಿಗೆ ಬಿಡುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರವಾಗಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

⚠️ ಸಾರ್ವಜನಿಕರಿಗೆ ಸೂಚನೆಗಳು:

  • ನದಿಪಾತ್ರದ ಹತ್ತಿರ ತಿರುಗಾಡಬೇಡಿ
  • ಜಾನುವಾರುಗಳನ್ನು ನದಿಯಿಂದ ದೂರವಿಡಿ
  • ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಗೊಳ್ಳಲಿ
  • ಸರ್ಕಾರಿ ಪ್ರಕಟಣೆಗಳನ್ನು ಅನುಸರಿಸಿ

Read More :ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650