ರಿಪ್ಪನ್ಪೇಟೆ ; ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ಬಾಳೂರು ಸಾರ್ವಜನಿಕ ಹೋರಾಟ ಸಮಿತಿಯ ಮಂಜುನಾಥ ಆಚಾರ್ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತ್ ಎದುರು ಪ್ರತಿಭಟನೆ ನಡೆಸಿದರು.
ಹೋರಾಟಗಾರ ನೆವಟೂರು ಮಂಜುನಾಥ ಆಚಾರ್ ಮಾತನಾಡಿ, ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆಂದು ಉಪಕೇಂದ್ರ ತೆರೆದಿರುವುದು ನೆಪ ಮಾತ್ರಕ್ಕೆ ಎನ್ನುವಂತಾಗಿದೆ. ದಿನದ ಬಹುತೇಕ ಸಮಯ ಕಛೇರಿಯ ಬೀಗ ಜಡಿದಿದ್ದು ಸಿಬ್ಬಂದಿ ನಾಪತ್ತೆಯಾಗಿರುತ್ತಾರೆ. ಇದರಿಂದ ಬೇರೆ ಊರುಗಳಿಗೆ ರೋಗಿಗಳು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಗೆ ಮತ್ತು ಮೇಲಾಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಲಾದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಗ್ರಾಮ ಪಂಚಾಯ್ತಿ ಸಾಮಸ್ಯ ಸಭೆಯಲ್ಲಿ ಸಹ ಚರ್ಚಿಸಲಾಗಿ ತುರ್ತಾಗಿ ಇಲ್ಲಿನ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಸಮುದಾಯ ಆರೋಗ್ಯಾಧಿಕಾರಿಯನ್ನು ನಿಯೋಜಿಸುವಂತೆ ನಿರ್ಣಯ ಕೈಗೊಳ್ಳುವುದರ ಮೂಲಕ ಇಲ್ಲಿನ ಸಾರ್ವಜನಿಕರಿಗೆ ಆಗುತ್ತಿರುವ ಅನಾಕೂಲವನ್ನು ಪರಿಹರಿಸುವಂತೆ ಪಂಚಾಯಿತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಸಂಬಂಧಿಸಿದವರ ಗಮನಕ್ಕೆ ತರಲಾದರೂ ಕೂಡಾ ಇಲಾಖೆಯವರು ನಿರ್ಲಕ್ಷ್ಯ ವಹಸಿದ್ದಾರೆಂದು ಗ್ರಾಮಾಧ್ಯಕ್ಷ ಶ್ರೀನಿವಾಸ್ ಆಚಾರ್ ಮಾಧ್ಯಮದವರಿಗೆ ವಿವರಿಸಿದರು.
ಪ್ರತಿಭಟನಾ ನಿರತರು ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಿಂದ ಮೆರವಣಿಗೆ ಹೊರಟು ಗ್ರಾಮ ಪಂಚಾಯಿತ್ವರೆಗೆ ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯಾಧಿಕಾರಿಗಳ ಮತ್ತು ಡಿಹೆಚ್ಓ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪಂಚಾಯಿತ್ ಮುಂಭಾಗ ಪ್ರತಿಭಟನೆ ನಡೆಸಿ ಇನ್ನೂ ಒಂದು ವಾರದೊಳಗೆ ಬಾಳೂರು ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಸಮುದಾಯ ಆರೋಗ್ಯ ಕಾರ್ಯಕರ್ತೆಯನ್ನು ನೇಮಿಸದಿದ್ದಲ್ಲಿ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಹೋರಾಟಗಾರ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ, ರೈತ ಮುಖಂಡ ಕುಕ್ಕಳಲೇ ಈಶ್ವರಪ್ಪಗೌಡ, ಬಾಳೂರು ಚಂದ್ರಶೇಖರಗೌಡ, ರಾಮಚಂದ್ರಗೌಡ ನೆವಟೂರು, ಸಂಜುಗೌಡ,
ಚನ್ನಪ್ಪ, ಗಜೇಂದ್ರ, ಮಹೇಂದ್ರ, ಸತೀಶ್, ಗಣೇಶ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಗ್ರಾಮಾಧ್ಯಕ್ಷ ಶ್ರೀನಿವಾಸ ಆಚಾರ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಕಳುಹಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ